Asianet Suvarna News Asianet Suvarna News

ಕಾಂಗ್ರೆಸ್‌ನ ಚೊಂಬು ಜಾಹೀರಾತಿಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ

ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಪಕ್ಷವೇ ಜನರಿಗೆ ಟೋಪಿ ಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹಾಯ್ದಿದ್ದರೆ, ರಾಜ್ಯದ ಕೋಟ್ಯಂತರ ಜನರಿಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

BJP Leaders  Slams Congress Advertisement During Lok Sabha Elections 2024 grg
Author
First Published Apr 20, 2024, 6:40 AM IST

ಬೆಂಗಳೂರು(ಏ.20):  ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಚೊಂಬು ಜಾಹೀರಾತಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಪಕ್ಷವೇ ಜನರಿಗೆ ಟೋಪಿ ಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹಾಯ್ದಿದ್ದರೆ, ರಾಜ್ಯದ ಕೋಟ್ಯಂತರ ಜನರಿಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದರು. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜನರೇ ಕಾಂಗ್ರೆಸ್‌ನವರಿಗೆ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಜನರ ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ. ಜನರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕೇಂದ್ರ ಸರ್ಕಾರ ನಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದೆ: ಚಲುವರಾಯಸ್ವಾಮಿ

ಅಶೋಕ್‌ ಮಾತನಾಡಿ, ಕಾಂಗ್ರೆಸ್ ಪಕ್ಷ 10 ಕೆ.ಜಿ. ಅಕ್ಕಿ ಎಂದು ಹೇಳಿ ಒಂದು ಕೆ.ಜಿ. ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರು. ಎಂದು 5 ರುಪಾಯಿ ನೀಡಿಲ್ಲ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್‌ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ. ಚೊಂಬು ತೆಗೆದುಕೊಂಡು ಕೇರಳಕ್ಕೆ ಹೋಗಲಿ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಅರಾಜಕತೆ

ಕಾಂಗ್ರೆಸ್ ಪಕ್ಷ 10 ಕೆ.ಜಿ. ಅಕ್ಕಿ ಎಂದು ಹೇಳಿ ಒಂದು ಕೆ.ಜಿ. ಕೂಡ ನೀಡಿಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿ ಕೊಲೆ, ಸುಲಿಗೆ ಅರಾಜಕತೆ ನಡೆಯುತ್ತಿದೆ. ಇವೆಲ್ಲದರಲ್ಲೂ ಜನರಿಗೆ ಚೊಂಬು ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. 

Follow Us:
Download App:
  • android
  • ios