Asianet Suvarna News Asianet Suvarna News

ಮೈಸೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಯತೀಂದ್ರ ಗೆಲ್ಲೋದು ಗ್ಯಾರಂಟಿ: ಶಾಸಕ ಪ್ರದೀಪ್ ಈಶ್ವರ್

ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ನೀಡಿದರು.

Chikkaballapur MLA Pradeep Eshwar outraged against MP Pratap simha at Chikkaballapur rav
Author
First Published Jan 11, 2024, 7:41 PM IST

ಚಿಕ್ಕಬಳ್ಳಾಪುರ (ಜ.11): ಈ ಬಾರಿ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಗೆಲ್ಲೋದು ಗ್ಯಾರಂಟಿ ಎನ್ನುವ ಮೂಲಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಪ್ರದೀಪ್ ಈಶ್ವರ್ ಅವರು, ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.

 

ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ರೆಡಿ: ಶಾಸಕ ಪ್ರದೀಪ್ ಈಶ್ವರ್!

ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ನೀವು ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ. 

ರಾಮಮಂದಿರದ ವಿಷಯದಲ್ಲಿ ಕಾಂಗ್ರೆಸ್ ಮೂರ್ಖತನ : ನಾನಂತೂ ಅಯೋಧ್ಯೆಗೆ ಹೋಗ್ತೇನೆ: ಸಂಸದ ಪ್ರಜ್ವಲ್ ರೇವಣ್ಣ

ಇದರೊಂದಿಗೆ ಈ ಬಾರಿ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕ ಬಂದಂತಾಗಿದೆ. ಕಾಂಗ್ರೆಸ್ ಈಗಾಗಲೇ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ. ಆದರೆ ಯಾವ ಕ್ಷೇತ್ರದ ಅಭ್ಯರ್ಥಿ ಎಂಬ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಈ ಮಧ್ಯೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಬಿಜೆಪಿ ಸಂಸದ ಪ್ರತಾಪ್​ ಸಿಂಹ ಅವರಿಗೆ ಬೈಯುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

Follow Us:
Download App:
  • android
  • ios