Asianet Suvarna News Asianet Suvarna News

ಸಿದ್ದರಾಮಯ್ಯ ಬಾಯಿಯಲ್ಲೂ ಸೀತಾರಾಮ ಹೇಳಿಸಿದ್ದ ಮೋದಿ: ಕೋಟ ಶ್ರೀನಿವಾಸ್‌ ಪೂಜಾರಿ

ಈ ಬಾರಿ ಹಿಂದೂ ವಿರೋಧಿಗಳನ್ನು ಅಧಿಕಾರದಿಂದ ದೂರವಿಟ್ಟು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ಇದಕ್ಕಾಗಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕತರು ಶ್ರಮ ಹಾಕಬೇಕು ಎಂದು ಕರೆ ನೀಡಿದ ಚಿಕ್ಕಮಗಳೂರು-ಉಡುಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್‌ ಪೂಜಾರಿ 

Chikkamagaluru Udupi BJP Candidate Kota Shrinivas Poojari Talks Over PM Narendra Modi grg
Author
First Published Mar 19, 2024, 6:52 AM IST

ಶಿವಮೊಗ್ಗ(ಮಾ.19):  ಶ್ರೀರಾಮ ಮಂದಿರ ನಿರ್ಮಾಣ ಮಾಡಿದಾಗ ಕಾಂಗ್ರೆಸ್‌ನವರು ರಾಮ ದೇವರಲ್ಲ, ಕಾಲ್ಪನಿಕ ಕಲ್ಪನೆ ಅಷ್ಟೇ ಎಂದರು. ಕೊನೆಗೆ ಆ ರೀತಿ ಹೇಳಿದ್ದ ಸಿದ್ದರಾಮಯ್ಯ ಅವರೇ ಜೈ ಸೀತಾರಾಮ ಎಂದು ಹೇಳಿದ್ದಾರೆ. ಇದೇ ಮೋದಿ ಶಕ್ತಿ ಎಂದು ಚಿಕ್ಕಮಗಳೂರು-ಉಡುಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದರು.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ ₹324 ಕೋಟಿ ಬರ ಪರಿಹಾರ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಇದರಲ್ಲಿ ಕೇಂದ್ರದ ಅನುದಾನವೇ ಹೆಚ್ಚಿದೆ ಎಂದರು.

ಬಿಜೆಪಿ ವಿರುದ್ಧ ಜೆಡಿಎಸ್‌ ಗರಂ: ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದ ಎಚ್‌ಡಿಕೆ

ಈ ಬಾರಿ ಹಿಂದೂ ವಿರೋಧಿಗಳನ್ನು ಅಧಿಕಾರದಿಂದ ದೂರವಿಟ್ಟು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ಇದಕ್ಕಾಗಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕತರು ಶ್ರಮ ಹಾಕಬೇಕು ಎಂದು ಕರೆ ನೀಡಿದರು.

Follow Us:
Download App:
  • android
  • ios