Asianet Suvarna News Asianet Suvarna News

ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ: ಸಿಎಂ ಸಿದ್ದರಾಮಯ್ಯ

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
 

Dont be fooled by BJP lies Says CM Siddaramaiah gvd
Author
First Published Feb 3, 2024, 1:17 PM IST

ಮುದ್ದೇಬಿಹಾಳ (ಫೆ.03): ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ಬಿಜೆಪಿಯವರ ಸುಳ್ಳುಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ನಾನು ಬಸವಾದಿ ಶರಣರ ಅನುಯಾಯಿ. ಮೌಢ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ ಎಂದ ಅವರು, ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿತು ಎಂದು ಹೇಳಿದರು.

ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ ಇವ ನಮ್ಮವ ಇವ ನಮ್ಮವ ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಒಂದೇ ದಿನ ₹227 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ: ಸಚಿವ ಸಂತೋಷ್‌ ಲಾಡ್‌

ಸಿಎಂಗೆ ಸ್ವಾಮೀಜಿಗಳ ಸನ್ಮಾನ: ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು ಕ್ಷೇತ್ರದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಸಕ್ಕರೆ ಸಚಿವ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರಾದ ಯಶವಂತರಾಯಗೌಡ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನೀಲಗೌಡ ಪಾಟೀಲ, ಪ್ರೊ.ಎಚ್‌.ಪೂಜಾರ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ ಉಪಸ್ಥಿತರಿದ್ದರು.

Follow Us:
Download App:
  • android
  • ios