Asianet Suvarna News Asianet Suvarna News

ಮೋದಿ ಹವಾದ ಮೇಲೆ ಎಷ್ಟು ವರ್ಷ ಗೆಲ್ತಿರಿ?: ಮಾಜಿ ಸಚಿವ ಬಿ.ಶ್ರೀರಾಮುಲು

ಪಕ್ಷದ ನಾಯಕರು ಸ್ವಂತ ವರ್ಚಸ್ಸು ಬೆಳೆಸಿಕೊಳ್ಳಬೇಕು ಎಂದು ಪಕ್ಷ ಸೂಚಿಸಿದೆ. ಮೋದಿ ಹವಾದ ಮೇಲೆ ಎಷ್ಟು ವರ್ಷ ಗೆಲ್ಲುತ್ತೀರಿ. ಸ್ವಂತ ಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಬೇಕೆಂದು ಹೇಳಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

How many years did Narendra Modi win on fame Says Former Minister B Sriramulu gvd
Author
First Published Mar 5, 2024, 4:00 AM IST

ಬಳ್ಳಾರಿ (ಮಾ.05): ಪಕ್ಷದ ನಾಯಕರು ಸ್ವಂತ ವರ್ಚಸ್ಸು ಬೆಳೆಸಿಕೊಳ್ಳಬೇಕು ಎಂದು ಪಕ್ಷ ಸೂಚಿಸಿದೆ. ಮೋದಿ ಹವಾದ ಮೇಲೆ ಎಷ್ಟು ವರ್ಷ ಗೆಲ್ಲುತ್ತೀರಿ. ಸ್ವಂತ ಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಬೇಕೆಂದು ಹೇಳಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಹವಾ ಶೇ. 80ರಷ್ಟು ಇದ್ದರೂ ಸ್ವಂತ ಶೇ. 20ರಷ್ಟು ವರ್ಚಸ್ಸು ಇರಬೇಕಾಗುತ್ತದೆ ಎಂದರು. ಬಳ್ಳಾರಿ ಲೋಕಸಭಾ ಚುನಾವಣೆಯಿಂದ ನಾನು ಸ್ಪರ್ಧಿಸಬೇಕು ಎಂದು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ತಿಳಿಸಿದ ಬಿ. ಶ್ರೀರಾಮುಲು ಅವರು, ಹಾಲಿ ಸಂಸದ ವೈ. ದೇವೇಂದ್ರಪ್ಪ ಅವರು ಸ್ಪರ್ಧೆಗೆ ಇಚ್ಛಿಸಿದ್ದಾರೆ. ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೂ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದರು.

ಬಳ್ಳಾರಿ ಲೋಕಸಭೆಗೆ ನಾನು ಆಕಾಂಕ್ಷಿಯಾಗಿರುವೆ ಎಂದು ಪಕ್ಷದ ಗಮನಕ್ಕೆ ತಂದಿದ್ದೇನೆ. ದೇವೇಂದ್ರಪ್ಪ ಅವರಿಗೂ ನನ್ನ ಮೇಲೆ ಅಪಾರ ಅಭಿಮಾನವಿದೆ. ನಾನು ರಾಜಕೀಯದಲ್ಲಿ ಮತ್ತಷ್ಟೂ ಬೆಳೆಯಬೇಕು ಎಂದು ಅವರು ಆಶಿಸಿದ್ದಾರೆ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಾಗ ಸಾಕಷ್ಟು ಜನರು ನೋವುಪಟ್ಟರು. ದೊಡ್ಡ ಮನುಷ್ಯನನ್ನು ಕಳೆದುಕೊಂಡಿದ್ದೇವೆ ಎಂದರು. ಜನಪರ ಹೋರಾಟಕ್ಕೆ ನಾನು ಬೇಕು ಎಂಬುದು ಜನರ ಆಸೆಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಕೋರಿರುವುದು ನಿಜ. ಆದರೆ, ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುವೆ ಎಂದರು.

ಜೆಡಿಎಸ್ ಎಲ್ಲಿದೆ? ಬಿಜೆಪಿ ಸ್ಪೋಕ್ಸ್ ಪರ್ಸನ್ ಆದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್

ತುಷ್ಟೀಕರಣ ರಾಜಕಾರಣ ಕಾಂಗ್ರೆಸ್ ನಿಲ್ಲಿಸಲಿ: ರಾಜ್ಯ ಶಕ್ತಿ ಸೌಧವಾಗಿರುವ ವಿಧಾನಸೌಧದಲ್ಲಿಯೇ ಕೇಳಿ ಬಂದಿರುವ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತಂತೆ ಪ್ರಕರಣವನ್ನು ಸರ್ಕಾರ ಎನ್ಐಗೆ ವಹಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮಲು ಒತ್ತಾಯಿಸಿದರು. ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕೇವಲ ಮತ ಪಡೆಯುವುದಕ್ಕಾಗಿ ಮುಸ್ಲಿಮರನ್ನು ಕಾಂಗ್ರೆಸ್‌ನವರು ತುಷ್ಟೀಕರಣಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು. 

ರಾಜ್ಯದಲ್ಲಿ ನಡೆದಿರುವ ಹಲವು ಕಹಿ ಘಟನೆಗಳನ್ನು ಕಾಂಗ್ರೆಸ್‌ನವರು ಹಗುರವಾಗಿ ತೆಗೆದುಕೊಳ್ಳುತ್ತಿದ್ದಾರೆ. ಪಾಕ್ ಪರ ಘೋಷಣೆ ಸ್ಪಷ್ಟವಾಗಿದ್ದರೂ ಅದನ್ನು ಕೆಟ್ಟದಾಗಿ ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್‌ನವರಿಗೆ ದೇಶಭಕ್ತಿಯೇ ಇಲ್ಲ ಎಂದರು. 134 ಸ್ಥಾನ ಪಡೆದಿರುವ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸರ್ಕಾರ ಕಳೆದುಕೊಳ್ಳುವ ಭೀತಿ ಇದೆ. ಇದೇ ಕಾರಣಕ್ಕಾಗಿ ಶಾಸಕರಿಗೆ ₹೫೦ ಕೋಟಿ ಆಮಿಷ ತೋರಿಸುತ್ತಿದ್ದಾರೆಂದು ಆರೋಪಿಸುತ್ತಿರುವುದು ಅವರ ಘನತೆಗೆ ತಕ್ಕುದಲ್ಲ. ಅವರಿಗೆ ಈ ರೀತಿಯ ಸಂಶಯವಿದ್ದರೆ ತಕ್ಷಣವೇ ಇದನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಮಾಡಲಿ. 

ದಾವಣಗೆರೆ ಲೋಕಸಭಾ ಕ್ಷೇತ್ರ ಗೆದ್ದೇ ಗೆಲ್ತೇವೆ: ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್ ಪೂರ್ಣಾವಧಿ ಸರ್ಕಾರ ನಡೆಸಲಿ ಎಂಬುದೇ ನಮ್ಮ ಆಶಯ. ಆದರೆ ಅವರಲ್ಲಿರುವ ಗೊಂದಲ, ಆತಂಕದಿಂದಾಗಿ ಮಹಾರಾಷ್ಟ್ರದಲ್ಲಿಯಂತೆ ನಮ್ಮ ರಾಜ್ಯದಲ್ಲಿಯೂ ಮತ್ತೊಬ್ಬ ಅಜಿತ್ ಪವಾರ್ ಹುಟ್ಟಿಕೊಂಡರೆ ಆಶ್ಚಯವಿಲ್ಲ. ನಾವು ಯಾವುದೇ ಶಾಸಕರ ಖರೀದಿಗೆ ಯತ್ನಿಸಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದರು. ಬಿಜೆಪಿ ನಗರ ಘಟಕ ಅಧ್ಯಕ್ಷ ಪಿ. ಭರಮನಗೌಡ ಪಾಟೀಲ, ಮಂಡಲ ಉಪಾಧ್ಯಕ್ಷ ಪಂಪಾಪತಿ ಅಂಗಡಿ, ಜಿಲ್ಲಾ ಕೋಷ್ಟಾಧಿಕಾರಿ ರಾಜೇಶ್ ಕರ್ವಾ, ಪಪಂ ಸದಸ್ಯ ಜಿ. ಸಿದ್ದಯ್ಯ, ಮುಖಂಡ ಮೂಗಪ್ಪ ಇತರರು ಇದ್ದರು.

Follow Us:
Download App:
  • android
  • ios