Asianet Suvarna News Asianet Suvarna News

ಆನೆಗೊಂದಿ ರಾಮಾಯಣದ ಕಿಷ್ಕಿಂಧೆ: ವಿಜಯನಗರ ಕಾಲದ 8 ಸಾಲುಗಳ ಶಾಸನ ಪತ್ತೆ

ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆ ಗೊಂದಿಯ ಕಡೆ ಬಾಗಿಲು ಬೆಟ್ಟದ ಮೇಲ್ಬಾಗದಲ್ಲಿ ವಿಜಯ ನಗರ ಕಾಲದ ಶಾಸನ ಪತ್ತೆಯಾಗಿದೆ. ಗಂಗಾವತಿಯ ಕಿಷ್ಕಂಧಾ ಯುವ ಚಾರಣ ಬಳಗದ ಸದಸ್ಯರು ಬೆಟ್ಟಕ್ಕೆ ಚಾರಣ ಹೋದಾಗ ಈ ಶಾಸನ ಗಮನಿಸಿದ್ದಾರೆ.
 

vijayanagara period inscription found historical record available for anegondi is kishkindha gvd
Author
First Published Apr 7, 2024, 12:57 PM IST

ಗಂಗಾವತಿ (ಏ.07): ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆ ಗೊಂದಿಯ ಕಡೆ ಬಾಗಿಲು ಬೆಟ್ಟದ ಮೇಲ್ಬಾಗದಲ್ಲಿ ವಿಜಯ ನಗರ ಕಾಲದ ಶಾಸನ ಪತ್ತೆಯಾಗಿದೆ. ಗಂಗಾವತಿಯ ಕಿಷ್ಕಂಧಾ ಯುವ ಚಾರಣ ಬಳಗದ ಸದಸ್ಯರು ಬೆಟ್ಟಕ್ಕೆ ಚಾರಣ ಹೋದಾಗ ಈ ಶಾಸನ ಗಮನಿಸಿದ್ದಾರೆ. ಮಣ್ಣಿನಲ್ಲಿ ಹೂತು ಹೋಗಿದ್ದ ಶಾಸನವನ್ನು ಪೂರ್ಣ ಸ್ವಚ್ಛಗೊ ಳಿಸಿದ ನಂತರ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಶಾಸನವನ್ನು ಪರಿಶೀಲಿಸಿ ಓದಿ ಅದರ ಮಹತ್ವ ಗುರುತಿಸಿದ್ದಾರೆ. 

ಶಾಸನವು 8 ಸಾಲುಗಳಲ್ಲಿದ್ದು ಸ್ವಸ್ತಿ ಶ್ರೀ ಜಯ‌ ಉದಯ ಶಾಲಿವಾಹನ ಶಕ ವರುಷ 1449ನೇ ಕಾಲ ಉಲ್ಲೇಖಿಸುತ್ತಿದ್ದು, ಅದು ಪ್ರಸಕ್ತ ಶಕ 1527ಕ್ಕೆ ಸರಿಯಾಗುತ್ತದೆ. ಶಾಸನದಲ್ಲಿ ಆನೆ ಗೊಂದಿಯ ಮಹಾ ಪ್ರಧಾನ ಲಕ್ಕಿ ಶೆಟ್ಟಿಯ ಮಗನಾದ ವಿಜ ಯನಾಥನು ಬೆಟ್ಟದ ಮೇಲಿನ ವೀರಭದ್ರ ದೇವರನ್ನು ಆರಾ ಧಿಸಿದ ಸಂಗತಿ ಬರೆಯಲ್ಪಟ್ಟಿದೆ. ಶಾಸನದಲ್ಲಿ ಪ್ರಾಸಂಗಿಕವಾಗಿ ಆನೆಗೊಂದಿಯನ್ನು ಹಸ್ತಿನಾವತಿ ಎಂದು ಅದು ಪಂಚಕೋಶ ಮಧ್ಯದಲ್ಲಿತ್ತೆಂದು ಹೇಳಲಾಗಿದೆ. ಅದಕ್ಕೆ ಕಿಮ್ಮಿಂದ ಪರ್ವತ ಎಂದು ಕೂಡ ಹೆಸರಿತ್ತು ಎಂದು ಉಲ್ಲೇಖಿಸಲಾಗಿರುವುದು ಗಮನಾರ್ಹವಾದ ಸಂಗತಿಯಾಗಿದೆ. 

ಆನೆಗೊಂದಿಯೇ ರಾಮಾಯಣ ಕಾಲದ ಕಿಷ್ಕಂಧ ಎಂದು ಗುರುತಿಸಲು ನೇರವಾಗಿ ಆನೆಗೊಂದಿಯಲ್ಲಿ ಯಾವ ಶಾಸನಗಳು ದೊರೆತಿರಲಿಲ್ಲ.ಆನೆಗೊಂದಿಯಿಂದ ದೂರದ ದೇವಘಾಟ್ ಮತ್ತು ಹುಲಿಗಿಯ ಶಾಸನಗಳಲ್ಲಿ ಮಾತ್ರ ಕಿಷ್ಕಂಧೆಯ ಉಲ್ಲೇಖವಿತ್ತು. ಪ್ರಸ್ತುತ ಆನೆಗೊಂದಿಯ ಈ ಶಾಸನವೇ ಕಿಂಧಾ ಪರ್ವತ ಎಂದು ಉಲ್ಲೇಖಿಸಿರುವುದುಕಿಷ್ಕಂಧ ಮತ್ತು ಆಂಜನೇಯನ ಜನ್ಮಸ್ಥಳಗಳ ಬಗೆಗಿನ ವಾದ ವಿವಾದಗಳ ಸಂದರ್ಭದಲ್ಲಿ ಈ ಉಲ್ಲೇಖ ತುಂಬಾ ಮಹತ್ವ ಪಡೆದುಕೊಂಡಿದೆ.

ಬೇಸಿಗೆಯ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ: ಬರಪೀಡಿತ ಶಾಲೆಗಳಿಗೆ ಅನ್ವಯ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಳ ವೆಂದು ಗುರುತಿಸಲು ಈ ಶಾಸನ ಮತ್ತೊಂದು ದಾಖಲೆಯಾಗಿದೆ ಎಂದು ಡಾ. ಕೋಲ್ಕಾರ್‌ ಅಭಿಪ್ರಾಯಪಟ್ಟಿದ್ದಾರೆ. ಶಾಸನ ಶೋಧನೆ ಹಾಗೂ ಪ್ರತಿ ಮಾಡಿಕೊಳ್ಳುವಲ್ಲಿ ಕಿಂಧಾಚಾರಣ ಬಳಗದ ಹರ ನಾಯಕ್, ಸಂತೋಷ್ ಕುಂಬಾರ್, ಅರ್ಜುನ್ ಆರ್., ಮಂಜುನಾಥ್ ಇಂಡಿ, ವಿಜಯ್ ಬಳ್ಳಾರಿ, ಆನಂದ ಚೌಡಕಿ, ವೀರೇಶ್ ಡಗ್ಗಿ ಹಾಗೂ ಇತರ ಸದಸ್ಯರು ನೆರವಾಗಿದ್ದಾರೆ ಎಂದು ಶರಣಬಸಪ್ಪ ಕೋಲ್ಕಾರ್‌ ತಿಳಿಸಿದ್ದಾರೆ.

Follow Us:
Download App:
  • android
  • ios