Ind vs Aus ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ನಮ್ಮ ತಂಡವನ್ನು ಕಾಡಿತು: ಹಾರ್ದಿಕ್ ಪಾಂಡ್ಯ
ಆಸೀಸ್ ಎದುರು ದಯನೀಯ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ ಬೌಲರ್ಸ್
208 ರನ್ಗಳ ಸವಾಲಿನ ಗುರಿ ರಕ್ಷಿಸಿಕೊಳ್ಳಲು ವಿಫಲವಾದ ಭಾರತ
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯ ಬಗ್ಗೆ ತುಟಿಬಿಚ್ಚಿದ ಹಾರ್ದಿಕ್ ಪಾಂಡ್ಯ
ಮೊಹಾಲಿ(ಸೆ.21): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಹಂತದಲ್ಲಿ ಬೌಲರ್ಗಳು ದುಬಾರಿಯಾಗಿದ್ದರಿಂದ ಪಂದ್ಯವನ್ನು ಟೀಂ ಇಂಡಿಯಾ ಕೈಚೆಲ್ಲಿತು.
ಟೀಂ ಇಂಡಿಯಾ ನೀಡಿದ್ದ 208 ರನ್ಗಳ ಸವಾಲಿನ ಗುರಿಯನ್ನು ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಪಂದ್ಯ ಮುಕ್ತಾಯದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಮೊದಲ ಪಂದ್ಯದಲ್ಲಿ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ತಮ್ಮ ತಂಡವನ್ನು ಕಾಡಿತು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಪ್ರೆಸ್ಮೀಟ್ನಲ್ಲಿ ಹಾರ್ದಿಕ್ ಪಾಂಡ್ಯ ಹೇಳಿದ್ದೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ