Asianet Suvarna News Asianet Suvarna News

Yogaraj Bhat: ಶಿವಣ್ಣ - ಪ್ರಭುದೇವ ಕಾಂಬಿನೇಷನ್ ಸಿನಿಮಾ ಐಡಿಯಾ ಹುಟ್ಟಿದ್ದು ಹೀಗೆ...

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ್ ನಟನೆಯ ಇನ್ನೂ ಹೆಸರಿಡದ ಸಿನಿಮಾದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ. ಈ ಚಿತ್ರಕ್ಕೆ ವಿಕಟಕವಿ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳುತ್ತಿದ್ದು, ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. 

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ್ ನಟನೆಯ ಇನ್ನೂ ಹೆಸರಿಡದ ಸಿನಿಮಾದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದ್ದು, ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗೆ ಚಾಲನೆ ಸಿಕ್ಕಿದೆ. ಪ್ರೊಡಕ್ಷನ್ ನಂಬರ್ 47 ಹೆಸರಿನಲ್ಲಿ ಸದ್ಯಕ್ಕೆ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ವಿಕಟಕವಿ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳುತ್ತಿದ್ದು, ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದ ಕಥೆಯನ್ನ ನಾನು ಎರಡು ವರ್ಷದಿಂದ ಗುದ್ದಾಡಿಕೊಂಡು ಬರೆದಿದ್ದೇನೆ. ಇದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ವೆಂಕಣ್ಣ, ಶಿವಣ್ಣ ಹಾಗೂ ರಾಷ್ಟ್ರ ಕಂಡ ಅದ್ಭುತ ನೃತ್ಯಪಟು ಪ್ರಭುದೇವ ಸರ್ ಕಾಂಬಿನೇಷನ್‌ನಲ್ಲಿ ಈ ಚಿತ್ರವನ್ನು ಡೈರೆಕ್ಟ್ ಮಾಡುತ್ತಿದ್ದೇನೆ ಎಂದು ಸಿನಿಮಾ ಐಡಿಯಾ ಹುಟ್ಟಿದ ಬಗೆಯನ್ನು ಯೋಗರಾಜ್ ಭಟ್ ತಿಳಿಸಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Video Top Stories